Dinesh Gundu Rao
2.0K subscribers
Verified ChannelAbout Dinesh Gundu Rao
Minister of Health &Family Welfare, Govt of Karnataka| MLA, Gandhinagar (Since 1999) | AICC In - Charge Secretary - Tamil Nadu & Puducherry | Engineer.
Similar Channels
Swipe to see more
Posts
ಇಂದು ವಿಧಾನಸೌಧದಲ್ಲಿ ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಅರಣ್ಯ ಇಲಾಖೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರೂ ಆದ ಶ್ರೀ ಪವನ್ ಕಲ್ಯಾಣ್ ಅವರಿಗೆ ಅಧಿಕೃತವಾಗಿ ಸರ್ಕಾರದ ಒಡಬಂಡಿಕೆಯ ಫೈಲ್ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷರು ಮತ್ತು ಶಾಸಕರಾದ ಶ್ರೀ ರಿಜ್ವಾನ್ ಅರ್ಷದ್, ಸಚಿವರಾದ ಶ್ರೀ ಈಶ್ವರ ಖಂಡ್ರೆ, ಶ್ರೀ ಕೆ.ಜೆ.ಜಾರ್ಜ್, ಶ್ರೀ ಬೈರತಿ ಸುರೇಶ್, ಸರ್ಕಾರದ ಹಿರಿಯ ಅಧಿಕಾರಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು