ಕಂಪದಕೋಡಿ ವೆದರ್ ರಿಪೋರ್ಟ್ - (ಕರ್ನಾಟಕ ರಾಜ್ಯದ ಹವಾಮಾನ ವರದಿ)
3.4K subscribers
Similar Channels
Swipe to see more
Posts
15-5-2025 ರ ಹವಾಮಾನ ಮುನ್ಸೂಚನೆ. ಕರಾವಳಿ ಜಿಲ್ಲೆಗಳಲ್ಲಿ ನಿನ್ನೆ ಗಾಳಿಯ ಒತ್ತಡ ಇಲ್ಲದ ಕಾರಣ ಮಳೆ ಕಡಿಮೆಯಾಗಿತ್ತು. ಕಾಸರಗೋಡಿನ ಕೆಲವೆಡೆ ಸುಳ್ಯ ಉ.ಕ ದ ಘಟ್ಟ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾಗಿದೆ. ಉತ್ತರ ಒಳನಾಡಿನ ಹೆಚ್ಚಿನ ಪ್ರದೇಶಗಳಲ್ಲಿ ಮಳೆಯಾಗಿದೆ. ಇವತ್ತಿನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಪಶ್ಚಿಮದ ಮೋಡ ಬರುತ್ತಿದ್ದು ಕಾಸರಗೋಡು - ದ.ಕ. ಕರಾವಳಿ ತೀರಗಳ ಸಹಿತ ಜಿಲ್ಲೆಯ ಅಲ್ಲಲ್ಲಿ ಹಗಲು ಮಳೆಯ ಮುನ್ಸೂಚನೆ ಇದೆ. ಸುಳ್ಯ ಬೆಳ್ತಂಗಡಿ ಕಾರ್ಕಳ ತಾಲ್ಲೂಕುಗಳ ಘಟ್ಟಪ್ರದೇಶಗಳಲ್ಲಿ ಸಂಜೆ ಮಳೆ ಸಾಧ್ಯತೆ ಇದೆ. ಆದರೇ ಈಗಾಗಲೇ ಕಾಸರಗೋಡು ದ.ಕ ದ ತೀರಪ್ರದೇಶಗಳಲ್ಲಿ ಮಳೆಯಾದ ಕಾರಣ ಸಂಜೆಯ ಮಳೆ ಸಾಧ್ಯತೆ ಕಡಿಮೆಯಾಗಬಹುದು. ಪಶ್ಚಿಮದ ಮೋಡ ಮುಂದುವರೆಯಬಹುದು. ಉಡುಪಿ ಉ.ಕ. ದ ಪಶ್ಚಿಮ ಘಟ್ಟಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಮುನ್ಸೂಚನೆ ಇದೆ. ಸೂಪ ಹಳಿಯಾಳ ಮುಂಡಗೋಡ ತಾ. ಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು ಹಾಸನ ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಹೆಚ್ಚಿನ ಪ್ರದೇಶಗಳಲ್ಲಿ ಮಳೆ ಮುನ್ಸೂಚನೆ ಇದೆ. ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಉತ್ತಮ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಇವತ್ತು ಮಳೆ ಪ್ರಮಾಣ ಸ್ವಲ್ಪ ಕಡಿಮೆ ಆಗಬಹುದು. ಚಾಮರಾಜನಗರ ಮೈಸೂರು ಕೋಲಾರ ಚಿಕ್ಕಬಳ್ಳಾಪುರ ಬೆಂಗಳೂರು ತುಮಕೂರು ದಾವಣಗೆರೆ ಚಿತ್ರದುರ್ಗ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಂಜೆಯ ನಂತರ ಮಳೆ ಮುನ್ಸೂಚನೆ ಇದೆ. ಬೆಳಗಾವಿ ಧಾರವಾಡ ಬಿಜಾಪುರ ಜಿಲ್ಲೆಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇರಲಿದ್ದು ಗಾಳಿಯ ಪ್ರಭಾವದಿಂದ ಉಳಿದ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಮಳೆಯಾಗಬಹುದು. ಅಂಡಮಾನ್ ಸುತ್ತಮುತ್ತ ಮುಂಗಾರು ಆರಂಭವಾಗಿ ಒಂದು ವಾರ ಮುಂಚಿತವಾಗಿ ಕರ್ನಾಟಕಕ್ಕೆ ಬರುವ ಮುನ್ಸೂಚನೆ ಇದ್ದರೂ ಮೇ 20 ರ ನಂತರ ಬಂಗಾಳ ಕೊಲ್ಲಿ ಮತ್ತು ಅರಬ್ಬೀಸಮುದ್ರದಲ್ಲಿ ವಾಯುಭಾರಕುಸಿತ ಸಂಭವಿಸುವ ಸಾಧ್ಯತೆಗಳು ಇರುವುದರಿಂದ ಮೇ 20-31 ತನಕ ರಾಜ್ಯದಲ್ಲಿ ಉತ್ತಮ ಮಳೆ ಬರಲಿದ್ದು ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ ಬರಬಹುದು.
14-5-2025 ರ ಹವಾಮಾನ ಮುನ್ಸೂಚನೆ. *ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಒಂದು ವಾರ ಮುಂಚಿತವಾಗಿ ಮುಂಗಾರು ಆರಂಭ* ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ನಿನ್ನೆ ಉತ್ತಮ ಮಳೆಯಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಿಡಿಲು ಮಳೆಯಾಗಿದ್ದು ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಮಳೆಯಾಗಿದೆ. ಇವತ್ತಿನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಮೋಡ - ಬಿಸಿಲಿನ ವಾತಾವರಣ ಇರಲಿದ್ದು ಹಗಲು ಕರಾವಳಿ ತೀರಪ್ರದೇಶಗಳ ಕೆಲವೆಡೆ ತುಂತುರು ಮಳೆ ಸಾಧ್ಯತೆ ಇದೆ. ಸಂಜೆ ಸುಳ್ಯ ಬೆಳ್ತಂಗಡಿ ಕಾರ್ಕಳ ತಾಲ್ಲೂಕುಗಳ ಘಟ್ಟಪ್ರದೇಶಗಳಲ್ಲಿ ಮಳೆ ಮುನ್ಸೂಚನೆ ಇದೆ. ರಾತ್ರಿ ಕಾಸರಗೋಡು ದ.ಕ ಉಡುಪಿ ಉ.ಕ ಜಿಲ್ಲೆಗಳ ತೀರಪ್ರದೇಶಗಳಲ್ಲಿ ಗುಡುಗು ಮಳೆ ಮುನ್ಸೂಚನೆ ಇದೆ. ಬಂಟ್ವಾಳ ಪುತ್ತೂರು ತಾಲ್ಲೂಕುಗಳ ಅಲ್ಲಲ್ಲಿ ರಾತ್ರಿ ಮಳೆ ಸಾಧ್ಯತೆ ಇದೆ. ಉ.ಕ ದ ಕರಾವಳಿ ತೀರದ ಕೆಲವೆಡೆ ಬೆಳಿಗ್ಗೆ ತುಂತುರು ಮಳೆಯಾಗಿದ್ದು ಶಿರಸಿ ಸಿದ್ದಾಪುರ ಹೊನ್ನಾವರ ತಾಲ್ಲೂಕುಗಳ ಅಲ್ಲಲ್ಲಿ ಮಳೆ ಮುನ್ಸೂಚನೆ ಇದೆ. ಮೇ 20 ರಿಂದ ಮಳೆ ಜಾಸ್ತಿ ಆಗಲಿದ್ದು ಮೇ 25 ಕ್ಕೆ ಆರಂಭಿಕ ಮುಂಗಾರು ಮೋಡ ಬರುವ ಸಾಧ್ಯತೆ ಇದೆ. ಕೊಡಗು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಶಿವಮೊಗ್ಗ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಮೈಸೂರು ಮಂಡ್ಯ ತುಮಕೂರು ಬೆಂಗಳೂರು - ಗ್ರಾಮಾಂತರ ಜಿಲ್ಲೆಗಳಲ್ಲಿ ಚಾಮರಾಜನಗರ ಜಿಲ್ಲೆಯ ಅಲ್ಲಲ್ಲಿ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ರಾಮನಗರ ಕೋಲಾರ ಚಿಕ್ಕಬಳ್ಳಾಪುರ ಚಿತ್ರದುರ್ಗ ದಾವಣಗೆರೆ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಮಳೆ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ನಿನ್ನೆ ಉತ್ತಮ ಮಳೆಯಾಗಿದ್ದು ಬೆಳಗಾವಿ ಧಾರವಾಡ ಗದಗ ಹಾವೇರಿ ಬಾಗಲಕೋಟೆ ಬಿಜಾಪುರ ಕೊಪ್ಪಳ ಬೀದರ್ ಕಲ್ಬುರ್ಗಿ ಯಾದಗಿರಿ ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆಯ ನಂತರ ಸಿಡಿಲು ಮಳೆ ಮುನ್ಸೂಚನೆ ಇದೆ. ರಾಜ್ಯದಲ್ಲಿ ಪೂರ್ವಮುಂಗಾರು ಮಳೆ ಇನ್ನೂ 10 ದಿನ ಮುಂದುವರಿಯಲಿದ್ದು ಮೇ 25-27 ರ ಮಧ್ಯ ಮುಂಗಾರು ಆಗಮದ ನಿರೀಕ್ಷೆ ಇದೆ. 16 ವರ್ಷಗಳ ನಂತರ ಈ ಸಲ ಬೇಗನೆ ಮೇ ತಿಂಗಳಿನಲ್ಲಿ ಕೇರಳ, ಕರ್ನಾಟಕಕ್ಕೆ ಆಗಮಿಸಲಿದೆ.
16-5-2025 ರ ಹವಾಮಾನ ಮುನ್ಸೂಚನೆ. ಕರಾವಳಿ ಜಿಲ್ಲೆಗಳಲ್ಲಿ ಅರಬ್ಬೀಸಮುದ್ರದ ಮೋಡದಿಂದ ನಿನ್ನೆಯಿಂದ ಅಲ್ಲಲ್ಲಿ ಸಣ್ಣ ಮಳೆ ಬರಲು ಆರಂಭವಾಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಮಳೆ ಮುಂದುವರೆದಿತ್ತು. ಇವತ್ತಿನ ಮುನ್ಸೂಚನೆ ಪ್ರಕಾರ ಕಾಸರಗೋಡು ದ.ಕ. ಜಿಲ್ಲೆಗಳಲ್ಲಿ ಮುಂಗಾರು ರೀತಿಯಲ್ಲಿ ಮೋಡ ಬರಲು ಆರಂಭವಾಗಿದ್ದು ಹಗಲು ಅಲ್ಲಲ್ಲಿ ಸಣ್ಣ ಮಳೆ ಮುಂದುವರೆಯಬಹುದು. ಸುಳ್ಯ ಕಾರ್ಕಳ ಬೆಳ್ತಂಗಡಿ ತಾಲ್ಲೂಕುಗಳ ಘಟ್ಟಪ್ರದೇಶಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ಇದೆ. ಉಡುಪಿ ಉ.ಕ ಕರಾವಳಿ ತೀರ ಪ್ರದೇಶಗಳಲ್ಲಿ ಹಗಲು ಮೋಡದ ವಾತಾವರಣ ಇರಲಿದ್ದು ಮಧ್ಯಾಹ್ನ ಮಳೆ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಮಳೆ ಆಗಲಿದ್ದು ಮೇ 18-19 ರ ನಂತರ ಎಲ್ಲೆಡೆ ಮಳೆ ಬರಬಹುದು. ಮೇ 31 ತನಕ ಈ ಸಲ ವಾಡಿಕೆಗಿಂತ ಜಾಸ್ತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕೊಡಗು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುನ್ಸೂಚನೆ ಇದೆ. ಶಿವಮೊಗ್ಗ ಹಾಸನ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಬಹುದು. ಮೇ 18 ರಿಂದ ಮಲೆನಾಡಿನಲ್ಲಿ ಎಲ್ಲೆಡೆ ಉತ್ತಮ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಚಾಮರಾಜನಗರ ರಾಮನಗರ ಬೆಂಗಳೂರು - ಗ್ರಾಮಾಂತರ ತುಮಕೂರು ಜಿಲ್ಲೆಗಳಾದ್ಯಂತ ಮಳೆ ಮುನ್ಸೂಚನೆ ಇದೆ. ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು ಕೋಲಾರ ಚಿಕ್ಕಬಳ್ಳಾಪುರ ಚಿತ್ರದುರ್ಗ ದಾವಣಗೆರೆ ಬಳ್ಳಾರಿ ಜಿಲ್ಲೆಗಳಲ್ಲಿಯೂ ಸಾಮಾನ್ಯ ಮಳೆ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ ಧಾರವಾಡ ಹಾವೇರಿ ಗದಗ ಬಾಗಲಕೋಟೆ ಬಿಜಾಪುರ ಕೊಪ್ಪಳ ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಮಳೆ ಮುನ್ಸೂಚನೆ ಇದೆ. ಮುಂಗಾರು ಆರಂಭವಾಗಿ ಮುಂದುವರೆಯುತ್ತಿದ್ದಂತೆ ಬಂಗಾಳಕೊಲ್ಲಿಯ ಲೋ ಪ್ರೆಷರ್ ಕಾರಣದಿಂದ ಮೋಡ ವೇಗವಾಗಿ ಬರುತ್ತಿದ್ದು ತಮಿಳುನಾಡು ಆಂಧ್ರ ರಾಜ್ಯಗಳಲ್ಲಿಯೂ ಮಳೆಯಾಗಬಹುದು. ಎಪ್ರಿಲ್ ಕೊನೆಯ ವಾರ ಅರಬ್ಬೀಸಮುದ್ರದಲ್ಲಿ ವಾಯುಭಾರಕುಸಿತ ಆಗಲಿದ್ದು ಮಹಾರಾಷ್ಟ್ರ ಗುಜರಾತ್ ರಾಜ್ಯಕ್ಕೂ ಮುಂಚಿತವಾಗಿ ಮಳೆ ಬರಬಹುದು. ಈ ವಾಯುಭಾರಕುಸಿತಗಳ ಕಾರಣದಿಂದ ಮೇ 20 ರ ನಂತರ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.