ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar WhatsApp Channel

ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar

1.4K subscribers

About ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar

*ಜಿಲ್ಲಾಡಳಿತ ಚಾಮರಾಜನಗರ ಜಿಲ್ಲೆ ರವರ ಅಧಿಕೃತ ವಾಟ್ಸ್‌ ಆಫ್‌ ಚಾನಲ್ - District Administration Chamarajanagar Official WhatsApp Channel.* Follow & Share our Social Media Platforms: *Facebook:* https://www.facebook.com/DCChamarajanagarCHN *Instagram:* https://www.instagram.com/dcchamarajanagar/ *X:* https://x.com/dcchnagar *YouTube:* https://youtube.com/@deputycommissioner255

Similar Channels

Swipe to see more

Posts

ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
2/14/2025, 12:54:34 PM
Image
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
2/14/2025, 12:54:33 PM
Image
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
2/15/2025, 5:58:33 AM

*ಚಾಮರಾಜನಗರದ ಕೆಲ್ಲಂಬಳ್ಳಿ ಗ್ರಾಮದಲ್ಲಿ ಮನೆ ನಿರ್ಮಾಣ ಸಂದರ್ಭದಲ್ಲಿ ಅಡಿಪಾಯ ತೆಗೆಯುವಾಗ ಕೆರೆ ಹಾವಿಗೆ ಕಬ್ಬಿಣ ಸರಳಿನಿಂದ ತೀವ್ರವಾದ ಗಾಯಗೊಂಡಿದ್ದನ್ನು ಉತ್ತುವಳ್ಳಿ ಗ್ರಾಮದ ಸ್ನೇಕ್ ಸುರೇಶ್ ರವರು ಕೆರೆ ಹಾವನ್ನು ಚಾಮರಾಜನಗರದ ಜಿಲ್ಲಾ ಪಶುಪಾಲನ ಪಾಲಿ ಕ್ಲಿನಿಕ್ ಗೆ ಕೊಂಡು ಹೋಗಿ ಪಶುಪಾಲನ ಸಹಾಯಕ ನಿರ್ದೇಶಕರಾದ ಡಾ. ಎಂ. ಮೂರ್ತಿ ರವರು ಮತ್ತು ಸಿಬ್ಬಂದಿ ವರ್ಗದವರು ಹಾವಿಗೆ ಸೂಕ್ತ ಚಿಕಿತ್ಸೆ ನೀಡಿ ಕಾಡಿಗೆ ಬಿಟ್ಟಿರುತ್ತಾರೆ ಹಾವಿನ ರಕ್ಷಣೆಗೆ ಮುತುವರ್ಜಿ ವಹಿಸಿದ ಸ್ನೇಕ್ ಸುರೇಶ್ ಮತ್ತು ಸೂಕ್ತ ಚಿಕಿತ್ಸೆ ನೀಡಿದ ಪಶುಪಾಲನ ಇಲಾಖೆಯ ವೈದ್ಯರಾದ ಎಂ.ಮೂರ್ತಿರವರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಧನ್ಯವಾದಗಳು.*

🙏 3
Video
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
2/14/2025, 12:54:54 PM

ಸಮಾಜದಲ್ಲಿ ಗೌರವಯುತವಾಗಿ ಬದುಕುವ ಹಕ್ಕು ಎಲ್ಲರಿಗೂ ಇದೆ : ನ್ಯಾಯಾಧೀಶರಾದ ಈಶ್ವರ ▪️ಸಮಾಜದಲ್ಲಿ ಗೌರವಯುತವಾಗಿ ಬದುಕುವ ಹಕ್ಕು ಎಲ್ಲರಿಗೂ ಇದ್ದು, ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ನೀಡಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ ಅವರು ತಿಳಿಸಿದರು. ▪️ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜೀತಪದ್ದತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ▪️ಬಡತನವನ್ನೆ ಬಂಡವಾಳವಾಗಿಸಿಕೊಂಡು ಬಡವರನ್ನು ಜೀವನಪೂರ್ತಿ ದುಡಿಸಿಕೊಳ್ಳಬಾರದು. ಅದು ವ್ಯಕ್ತಿಯ ಮೂಲಭೂತ ಹಕ್ಕುಗಳ ನೇರ ಉಲ್ಲಂಘನೆಯಾಗಲಿದೆ. ಜೀತಪದ್ದತಿ ನಿರ್ಮೂಲನಾ ಕಾಯ್ದೆಯನ್ನು ಸರ್ಕಾರವು 1976ರಲ್ಲಿ ಜಾರಿಗೊಳಿಸಿದೆ. ದೇಶದ ಪ್ರತಿಯೊಬ್ಬರು ಗೌರವದಿಂದ ಬದುಕಲು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸಮಾನತೆ ಕುರಿತ ಹಲವಾರು ಅನುಚ್ಛೇದಗಳನ್ನು ಅಡಕಗೊಳಿಸಿದ್ದಾರೆ. ಎಲ್ಲಿಯೇ ಆಗಲಿ ಜೀತಪದ್ದತಿ ಕಂಡುಬಂದರೆ ಅಂತಹವರನ್ನು ಗುರುತಿಸಿ ಅವರಿಗೆ ಪುನರ್ವಸತಿ ಕಲ್ಪಿಸುವ ಕೆಲಸವಾಗಬೇಕು ಎಂದು ನ್ಯಾಯಾಧೀಶರಾದ ಈಶ್ವರ ಅವರು ತಿಳಿಸಿದರು. ▪️ಜೀತಪದ್ದತಿ ನಿರ್ಮೂಲನೆಯ ಅರಿವು ಮೂಡಿಸುವ ಧ್ಯೇಯವಾಕ್ಯಗಳನ್ನು ಮರದ ಪ್ರತಿಕೃತಿಗೆ ಅಳವಡಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಕನಿಷ್ಠ ಬಡವರು, ಸಮಾಜದ ಕಟ್ಟಕಡೆಯ ವ್ಯಕ್ತಿಗಳು ಜೀತ ಪದ್ದತಿಗೆ ಸಿಲುಕಿರುವುದನ್ನು ನೋಡಿದ್ದೇವೆ. ಕನಿಷ್ಠ ವೇತನ ನೀಡದೇ ಒತ್ತಾಯಪೂರ್ವಕವಾಗಿ ದುಡಿಸಿಕೊಳ್ಳವುದು ತಪ್ಪಾಗಲಿದೆ ಎಂದರು. ▪️ಜೀತಪದ್ದತಿಯನ್ನು ತೊಲಗಿಸಲು ಜೀತ ವ್ಯಕ್ತಿಗಳನ್ನು ಗುರುತಿಸಿ, ಪರಿಹಾರ ನೀಡಿ ಸಂಪೂರ್ಣವಾಗಿ ಅವಶ್ಯ ಪುನರ್ವಸತಿ ಕಲ್ಪಿಸುವುದು ಜಿಲ್ಲಾಮಟ್ಟದ ಅಧಿಕಾರಿಗಳ ಜವಾಬ್ದಾರಿಯೂ ಆಗಿದೆ. ಜಿಲ್ಲೆಯಲ್ಲಿ 2015-16, 2017ರಲ್ಲಿ ಜೀತಪದ್ದತಿ ಸಮೀಕ್ಷೆ ನಡೆಸಿ 45-52 ಜನರನ್ನು ಗುರುತಿಸಲಾಗಿತ್ತು. ಜೀತದಾಳುಗಳ ಪುನರ್ವಸತಿ ಕಾರ್ಯ ಸದ್ಯದಲ್ಲಿಯೇ ಸಂಪೂರ್ಣಗೊಳ್ಳಲಿದೆ. ಸರ್ಕಾರದ ನೀತಿ, ನಿಯಮಗಳನ್ವಯ ಅವರಿಗೆ ಸಹಾಯಹಸ್ತ ಚಾಚಬೇಕಿದೆ. ಅದು ನಮ್ಮೆಲ್ಲರ ಕರ್ತವ್ಯವೂ ಆಗಿದೆ. ಜೀತಪದ್ದತಿ ನಿರ್ಮೂಲನೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಚಾಮರಾಜನಗರವನ್ನು ಜೀತ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಪಣ ತೊಡೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು. ▪️ಜೀತಪದ್ದತಿ ನಿರ್ಮೂಲನೆಯ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ ಅವರು ಜೀತ ಸಾಮಾಜಿಕ ಅನಿಷ್ಠ ಪದ್ದತಿ. ಯಾವುದೋ ಕಾರಣಕ್ಕಾಗಿ ವ್ಯಕ್ತಿಯ ಹಕ್ಕುಗಳನ್ನು, ವೈಯಕ್ತಿಕ ಬದುಕನ್ನು ಬಲವಂತವಾಗಿ ಕಸಿಯುವುದೇ ಜೀತಪದ್ದತಿ. ಜೀತ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸಿ ನಾಗರಿಕ ಸಮಾಜದಿಂದ ಜೀತಪದ್ದತಿಯನ್ನು ಸಂಪೂರ್ಣವಾಗಿ ತೊಲಗಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು. ▪️ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ ಜೀತಪದ್ದತಿ ನಿರ್ಮೂಲನೆ ಕಾರ್ಯದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮುಖ್ಯವಾಗಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ಜೀತಪದ್ದತಿಯನ್ನು ಗುರುತಿಸಿ ಜೀತವಿಮುಕ್ತರಿಗೆ ಪರಿಹಾರ, ಪುನರ್ವಸತಿ ಕಲ್ಪಿಸಲು ಅಧಿಕಾರಿಗಳ ತಂಡ ಮುಂದಾಗಬೇಕು ಎಂದರು. ▪️ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ವಕೀಲರಾದ ರೂಪಶ್ರೀ ಅವರು ಮಾತನಾಡಿ ಜೀತಪದ್ದತಿ ನಿರ್ಮೂಲನೆ ಕುರಿತು ಕಾರ್ಯಗಾರದಲ್ಲಿ ಭಾಗವಹಿಸಿದ್ದ ಅಧಿಕಾರಿಗಳಿಗೆ ಸವಿವರವಾಗಿ ಮಾಹಿತಿ ನೀಡಿದರು. ▪️ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪಿ. ಲಕ್ಷ್ಮೀ, ಜೀತ ವಿಮುಕ್ತ ಸಂಘಟನೆಯ ಆರ್.ಎಫ್.ಎಫ್ ಜಿಲ್ಲಾ ಸಂಚಾಲಕರಾದ ಜಿ.ಕೆ. ಕುನ್ನಹೊಳಿಯಯ್ಯ, ಇತರರು ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು. #ChamarajanagarUpdates #Chamarajanagar #JeetaPaddathiNirmulane #Awareness #Meeting

ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
2/14/2025, 11:58:13 AM

ಫೆ. 21ರಂದು ಮಲೆ ಮಹದೇಶ್ವರಬೆಟ್ಟದಲ್ಲಿ ರಾಜ್ಯಮಟ್ಟದ ಜಾನಪದ ಜಾತ್ರೆ : ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ▪️ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವಿಶೇಷ ಘಟಕ ಉಪಯೋಜನೆಯಡಿ ವಿವಿಧ ಪ್ರಕಾರದ ಜಾನಪದ ಕಲೆಗಳ ಪ್ರದರ್ಶನವಾದ ‘ಜಾನಪದ ಜಾತ್ರೆ’ ರಾಜ್ಯಮಟ್ಟದ ಕಾರ್ಯಕ್ರಮವನ್ನು ಇದೇ ಫೆಬ್ರವರಿ 21ರಂದು ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರಬೆಟ್ಟದಲ್ಲಿ ಆಯೋಜಿಸಿದ್ದು, ಇದಕ್ಕೆ ಸಕಲ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು. ▪️ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಾನಪದ ಜಾತ್ರೆ ರೂಪುರೇಷಗಳ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ▪️ಪರಿಶಿಷ್ಟ ಜಾತಿ ಸಮುದಾಯದಲ್ಲಿ ಇರುವ ಕಲೆಗಳನ್ನು ಪುನಶ್ಚೇತನಗೊಳಿಸಿ ಮತ್ತು ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಜಾನಪದ ಜಾತ್ರೆ ಶೀರ್ಷಿಕೆಯಡಿಯಲ್ಲಿ ರಾಜ್ಯ ಸರ್ಕಾರ ವಿವಿಧ ಪ್ರಕಾರದ ಜಾನಪದ ಕಲೆಗಳನ್ನು ಒಂದೇ ಸೂರಿನಡಿ ತಂದು ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು. ▪️ರಾಜ್ಯಮಟ್ಟದ ಜಾನಪದ ಜಾತ್ರೆ ಕಾರ್ಯಕ್ರಮ ಆಯೋಜನೆಗೆ ಮಲೆ ಮಹದೇಶ್ವರಬೆಟ್ಟವನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಜಿಲ್ಲೆಗೆ ಈ ಅವಕಾಶ ದೊರೆತಿರುವುದನ್ನು ಸದುಪಯೋಗಪಡಿಸಿಕೊಳ್ಳಬೇಕು. ರಾಜ್ಯದ ವಿವಿಧ ಜಾನಪದ ಕಲಾತಂಡಗಳನ್ನು ಗುರುತಿಸಿ 40 ರಿಂದ 45 ವಿವಿಧ ಕಲಾ ಪ್ರಕಾರಗಳ ತಂಡಗಳಿಗೆ ತರಬೇತಿ ಮತ್ತು ಪ್ರದರ್ಶನಕ್ಕೆ ಅವಕಾಶವಾಗುತ್ತಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. ▪️ಜಾನಪದ ಜಾತ್ರೆ ಕಾರ್ಯಕ್ರಮ ಮಲೆಮಹದೇಶ್ವರ ಬೆಟ್ಟದ ರಂಗಂದಿರದಲ್ಲಿ ಫೆಬ್ರವರಿ 21ರಂದು ಸಂಜೆ ನಿಗದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಜಾನಪದ ಕಲಾವಿದರಿಗೂ ಹೆಚ್ಚಿನ ಅವಕಾಶ ಹಾಗೂ ಆದ್ಯತೆ ನೀಡಬೇಕು. ರಾಜ್ಯದ ವಿವಿಧ ಭಾಗಗಳಿಂದ ಅಂದಾಜು 500 ಕಲಾವಿದರು ಭಾಗವಹಿಸುವ ನಿರೀಕ್ಷೆಯಿದೆ. ಈ ಎಲ್ಲ ಕಲಾವಿದರಿಗೆ ವಾಸ್ತವ್ಯ, ಊಟ ಉಪಹಾರ ಸೇರಿದಂತೆ ಎಲ್ಲ ಅಗತ್ಯ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ಒದಗಿಸಬೇಕೆಂದು ಜಿಲ್ಲಾಧಿಕಾರಿಯವರು ಸೂಚಿಸಿದರು. ▪️ಕಲಾ ಪ್ರದರ್ಶನಕ್ಕೆ ಬೃಹತ್ ವೇದಿಕೆ, ಉತ್ತಮ ಧ್ವನಿ, ಬೆಳಕು, ವಿನ್ಯಾಸ ಇರಬೇಕು. ಎಲ್ಲವು ಗುಣಮಟ್ಟದ್ದಾಗಿರಬೇಕು. ಕಲಾವಿದರು ಪ್ರದರ್ಶನ ನೀಡಿದ 24 ಗಂಟೆಯೊಳಗೆ ಸಂಭಾವನೆ ಕಲಾವಿದರ ಬ್ಯಾಂಕ್ ಖಾತೆಗೆ ಜಮೆಯಾಗಬೇಕು. ಕಲಾ ಪ್ರದರ್ಶನ ಹಾಗೂ ತಾಲೀಮಿಗಾಗಿ ಕಲಾವಿದರು ಮುಂಚಿತವಾಗಿಯೇ ಆಗಮಿಸಲಿದ್ದಾರೆ. ಇದಕ್ಕೂ ಸೂಕ್ತ ಏರ್ಪಾಡು ಮಾಡಬೇಕು ಎಂದರು. ▪️ಜಾನಪದ ಜಾತ್ರೆ ಸುಸೂತ್ರವಾಗಿ ನಡೆಯಲು ವಿವಿಧ ಸಮಿತಿಗಳನ್ನು ನೇಮಕ ಮಾಡಿ ಜವಾಬ್ದಾರಿ ನೀಡಲಾಗುತ್ತದೆ. ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆ ಮುದ್ರಣ ಇನ್ನಿತರ ಪ್ರಕ್ರಿಯೆಗಳು ಕೈಗೊಳ್ಳಬೇಕಿದೆ. ಯಾವುದೇ ಗೊಂದಲಕ್ಕೆ ಅವಕಾಶವಾಗದಂತೆ ಸಾಕಷ್ಟು ಮುಂಚಿತವಾಗಿಯೇ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ರಾಜ್ಯಮಟ್ಟದ ಜಾನಪದ ಜಾತ್ರೆ ಯಶಸ್ವಿಗೊಳಿಸಲು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು. ▪️ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಮಲೈಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಚಾಮರಾಜನಗರ ಜಿಲ್ಲೆಯ ಸಹಾಯಕ ನಿರ್ದೇಶಕರಾದ ಉದಯ್ ಕುಮಾರ್, ಜಾನಪದ ಜಾತ್ರೆ ಕಾರ್ಯಕ್ರಮದ ಪ್ರಧಾನ ನಿರ್ದೇಶಕರಾದ ಕುಂತೂರು ಕುಮಾರ್, ನಿರ್ದೇಶಕರಾದ ಹನುಮಂತನಾಯಕ, ಸಂಚಾಲಕರಾದ ಡಾ. ಸಬ್ಬನಹಳ್ಳಿ ರಾಜು, ಕೆ. ನಾಗರಾಜು, ಹೆಚ್.ಸಿ. ನಿಂಗರಾಜು, ಬಿ. ಅನಿಲ್ ಕುಮಾರ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಯೋಗಾನಂದ್, ಹನೂರು ತಹಶೀಲ್ದಾರ್ ಗುರುಪ್ರಸಾದ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಇನ್ನಿತರ ಅಧಿಕಾರಿಗಳು ಇದ್ದರು. #ChamarajanagarUpdates #Chamarajanagar #JanapadaJatre

ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
2/14/2025, 4:25:13 PM

Notification to recruit Paramedical Staff under NHM (Contract Basis). Interview/ Document Verification on 28-02-2025

Image
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
2/17/2025, 3:21:55 PM
Image
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
2/15/2025, 10:40:09 AM

*ದಿನಾಂಕ: 18-02-2025ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ-2025* #Chamarajanagar #ChamarajanagarUpdates #JobSearch #HireMe #JobSeeker #JobSearching #DirectInterview

👍 1
Image
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
2/14/2025, 12:54:32 PM
Image
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
2/14/2025, 11:57:59 AM
Image
Link copied to clipboard!