Karnataka Varthe
February 7, 2025 at 01:19 PM
ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ಮೈಸೂರು ಜಿಲ್ಲೆಯ ವಿಜಯನಗರದ 2ನೇ ಹಂತದ ಬಡಾವಣೆಯಲ್ಲಿನ ಕಟ್ಟಡದಲ್ಲಿ ಅಕ್ರಮವಾಗಿ ಹೆಚ್ಚುವರಿ ಮಹಡಿಯನ್ನು ನಿರ್ಮಿಸಿದ್ದು, ಇದರಿಂದ ಸುತ್ತಮುತ್ತಲಿನ ಜನರಿಗೆ ಅಪಾಯವಾಗುವ ಸಾಧ್ಯತೆಯಿರುವುದಾಗಿ ಇ-ಮೇಲ್ ಬಳಕೆದಾರರೊಬ್ಬರು ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗಕ್ಕೆ ದೂರು ನೀಡಿದ್ದರು. ತಕ್ಷಣವೇ ಸ್ಪಂದಿಸಿದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಅದರಂತೆ ಸದರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿ ಉಲ್ಲಂಘನೆಯಾದ ಹೆಚ್ಚುವರಿ ಮಹಡಿಯನ್ನು ತೆರವುಗೊಳಿಸಲಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮವಹಿಸಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರು ತಿಳಿಸಿದ್ದಾರೆ.
❤️
👍
3