Karnataka Varthe
February 13, 2025 at 01:21 PM
ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ಬೆಂಗಳೂರು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಚ್.ಎಚ್.ಐ.ಎಸ್ ಘೋಷಾ ಆಸ್ಪತ್ರೆಗೆ ಬರುವ ತಾಯಂದಿರು ಹಾಗೂ ಮಕ್ಕಳ ಸಂಖ್ಯೆ ಹೆಚ್ಚಾದಂತೆ ಸಿಬ್ಬಂದಿಗಳ ಕೊರತೆ ಉಂಟಾಗಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಅದರಂತೆ, ಖಾಲಿ ಇರುವ ಹುದ್ದೆಗಳನ್ನು ರೋಗಿಗಳ ಚಿಕಿತ್ಸೆ ಹಾಗೂ ಆಸ್ಪತ್ರೆಯ ದೈನಂದಿನ ಕೆಲಸ ಕಾರ್ಯಗಳ ಹಿತದೃಷ್ಟಿಯಿಂದ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗಿದ್ದು, ಉಳಿದಂತೆ ಸ್ವಚ್ಛತಾ, ಭದ್ರತಾ ಮತ್ತು ಡಾಟಾ ಎಂಟ್ರಿ ಅಪರೇಟರ್ ಸಿಬ್ಬಂದಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗಿರುತ್ತದೆ ಎಂದು ಬೆಂಗಳೂರು ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
❤️
1