Karnataka Varthe

37.1K subscribers

Verified Channel
Karnataka Varthe
February 26, 2025 at 11:53 AM
ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್‌ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯ ಪಡೆದು ಸಂಚಾರ ನಡೆಸುತ್ತಿದ್ದು, ನಿಜಾರ್ಥದಲ್ಲಿ ಶಕ್ತಿ ನಾಡಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದೆ. ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಹೆಚ್ಚುವರಿ ಬಸ್‌ಗಳನ್ನು ಖರೀದಿಸಲಾಗಿದೆ. ಈ ಮೂಲಕ ಉದ್ಯೋಗ ಸೃಷ್ಟಿಯು ಹೆಚ್ಚಾಗಿದೆ. ಈಗಾಗಲೇ ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡುವುದರ ಜೊತೆಗೆ 2,000 ಚಾಲಕ ಕಂ ನಿರ್ವಾಹಕರು ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಆದೇಶಿಸಲಾಗಿದೆ. * ಮುಖ್ಯಮಂತ್ರಿ ಸಿದ್ದರಾಮಯ್ಯ #shakti I #shaktischeme I #ಶಕ್ತಿಸಂಚಾರ I #ಶಕ್ತಿ
Image from Karnataka Varthe: ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್‌ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮ...
👍 ❤️ 😢 4

Comments