Priyank Kharge 🇮🇳

17.6K subscribers

Verified Channel
Priyank Kharge 🇮🇳
February 24, 2025 at 11:00 AM
ಇಂದು ಕಲಬುರಗಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಂಬರುವ ಬೇಸಿಗೆಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಪೂರೈಕೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಮಾರ್ಗಸೂಚಿಗಳನ್ನು ನೀಡಲಾಯಿತು. ಪ್ರತಿ ವರ್ಷ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ನಗರ-ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಕಂಡುಬರುವ ಸಂಭಾವ್ಯ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸಲು ಚಿಂತನೆ ನಡೆಸಲಾಗುತ್ತಿದ್ದು, ಕೂಡಲೆ ತಾಲೂಕುವಾರು ಸಭೆ ನಡೆಸಿ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಹಿಂದಿನ 5 ವರ್ಷಗಳ ಸಮಸ್ಯಾತ್ಮಕ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಿ ಸಲ್ಲಿಸಿದಲ್ಲಿ ಕಂದಾಯ, ಕೃಷಿ, ರೇಷ್ಮೆ, ತೋಟಗಾರಿಕೆ, ಪಶುಸಂಗೋಪನಾ ಸಚಿವರೊಂದಿಗೆ ಚರ್ಚಿಸಿ ಪರಿಹಾರ ಕಲ್ಪಿಸುವುದರ ಜೊತೆಗೆ ಇದಕ್ಕೆ ಬೇಕಾದ ಹಣ ಸಹ ಹೊಂದಿಸಲಾಗುವುದು ಎಂದು ತಿಳಿದಿದೆ. ಪ್ರತಿ ಬೇಸಿಗೆಯಲ್ಲಿ ಹೊಸದಾಗಿ ಬೋರವೆಲ್ ಕೊರೆಯುವುದು ಬೇಡ. ಬದಲಾಗಿ ಇರುವ ಬೋರವೆಲ್ ಗಳಿಗೆ ಫ್ಲಶ್ಸಿಂಗ್ ಮಾಡಬೇಕು, ಮೋಟಾರ್ ಕೆಟ್ಟಿದರೆ ಅದನ್ನು ಬದಲಾಯಿಸಬೇಕು. ಯುದ್ದ ಆರಂಭವಾದಾಗ ಶಸ್ತ್ರಾಭ್ಯಾಸ ಬೇಡ. ಈಗಿನಿಂದಲೆ ಸಮಸ್ಯಾತ್ಮಕ ಹಳ್ಳಿ, ನಗರ ಪಟ್ಟಣಗಳಲ್ಲಿ ಕುಡಿಯುವ ನೀರು ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದೆ. ಹವಾಮಾನ ಇಲಾಖೆ ಪ್ರಕಾರ ಈ ಬಾರಿ ಹೆಚ್ಚಿನ ಬಿಸಿಲಿನ ಜೊತೆಗೆ ಬಿಸಿ ಗಾಳಿ ಇದೆ ಎಂದು ವರದಿ ವರದಿ ಬಂದಿದೆ. ಹೀಗಾಗಿ ಎಲ್ಲಾ ಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಬಳಿ ಪಿ.ಡಿ.ಖಾತೆಯಲ್ಲಿ ಹಣ ಇದ್ದು, ಅದನ್ನು ಸಮರ್ಪಕವಾಗಿ ಬಳಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಕಳೆದ ವರ್ಷ ನೀರು ಪೂರೈಕೆ ಮಾಡಿದ ಖಾಸಗಿ ಬೋರವೆಲ್, ಟ್ಯಾಂಕರ್ ಗಳಿಗೆ ಬಾಕಿ ಉಳಿದಿದೆ ಎಂಬ ಮಾಹಿತಿ ಇದ್ದು, ಕೂಡಲೆ ಸದರಿ ಬಿಲ್ಲು ಕ್ಲಿಯರ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಮತ್ತು ಸಿ.ಇ.ಓ ಗಳಿಗೆ ನಿರ್ದೇಶನ ನೀಡಿದೆ. 15ನೇ ಹಣಕಾಸು ಯೋಜನೆಯಡಿ ಬೋರವೆಲ್ ಕೊರೆಯಲು ದಕ್ಷಿಣ ಕ್ಷೇತ್ರಕ್ಕೆ ₹96 ಲಕ್ಷ ಉತ್ತರ ಕ್ಷೇತ್ರಕ್ಕೆ ₹79 ಲಕ್ಷ, ನಗರಕ್ಕೆ ₹1 ಕೋಟಿ ಸೇರಿ ಒಟ್ಟಾರೆ ₹2.75 ಕೋಟಿ ಮೀಸಲಿರಿಸಲಾಗಿದೆ. ಪ್ರತಿ ವಾರ್ಡ್ ಗೆ ಒಂದು ಟ್ಯಾಂಕರ್ ಮೀಸಲಿರುವಂತೆ ಎಲ್ & ಟಿ ಕಂಪನಿಗೆ ಸೂಚನೆ ನೀಡಲಾಗಿದೆ. ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಪಾಲಿಕೆ ಸದಸ್ಯರು ಮತ್ತು ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲ. ಕೂಡಲೆ ಸಭೆ ಕರೆದು ಸಮನ್ವಯ ಸಾಧಿಸಬೇಕು ಎಂದು ತಿಳಿಸಿದೆ. ಮಾರ್ಚ್ 1 ರಿಂದ ಮುಂದಿನ ಮೂರು ತಿಂಗಳ ಕಾಲ ಪ್ರತಿ 15 ದಿನಕ್ಕೊಮ್ಮೆ ತಹಶೀಲ್ದಾರರು ಮತ್ತು ತಾಲೂಕಾ ಪಂಚಾಯತ್ ಇ.ಓ ಗಳು ತಾಲೂಕು ಮಟ್ಟದಲ್ಲಿ ಕುಡಿಯುವ ನೀರು ಕುರಿತು ಸಭೆ ನಡೆಸಿ ಪರಾಮರ್ಶಿಸಬೇಕು. ಟಾಸ್ಟ್ ಫೋರ್ಸ್ ಸಭೆ ಕರೆದು ಸಭೆ ನಡಾವಳಿ ಸಿದ್ದಪಡಿಸಿ ಅದರಂತೆ ಅನುದಾನ ಖರ್ಚು ಮಾಡಬೇಕು. ಎಲ್ಲಿಯೂ ಕುಡಿಯುವ ನೀರಿನ‌ ಸಮಸ್ಯೆ ಬಾರದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ. ಈ ಸಂದರ್ಭದಲ್ಲಿ ಸಚಿವರಾದ ಡಾ. ಶರಣ ಪ್ರಕಾಶ ಪಾಟೀಲ್, ಸಂಸದರಾದ ರಾಧಾಕೃಷ್ಣ ದೊಡ್ಡಮನಿ, ಶಾಸಕರು ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
Image from Priyank Kharge 🇮🇳: ಇಂದು ಕಲಬುರಗಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಂಬರುವ ಬೇಸಿಗೆಗೆ ಕುಡಿಯುವ ನೀರು...
🙏 ❤️ 👍 11

Comments