ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
ಜಿಲ್ಲಾಡಳಿತ ಚಾಮರಾಜನಗರ | District Administration Chamarajanagar
February 1, 2025 at 02:01 PM
*ಮಡಿವಾಳ ಮಾಚಿದೇವರು ಶಿವಶರಣರಲ್ಲಿ ಶ್ರೇಷ್ಠ ವಚನಕಾರರು : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ* ▪️ಬಸವಣ್ಣನವರ ಅನುಭವ ಮಂಟಪದಲ್ಲಿದ್ದ ಶಿವಶರಣರಲ್ಲಿ ಮಡಿವಾಳ ಮಾಚಯ್ಯ ಅವರು ಅತ್ಯಂತ ಶ್ರೇಷ್ಠ ವಚನಕಾರರಾಗಿದ್ದಾರೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು. ▪️ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಸರಳವಾಗಿ ಆಯೋಜಿಸಲಾಗಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ▪️ಮಡಿವಾಳ ಮಾಚಿದೇವ ಅವರು ಕಾಯಕದಲ್ಲಿ ನಿಷ್ಠೆಯುಳ್ಳ ಶಿವಶರಣರ ಮೈಲಿಗೆ ಬಟ್ಟೆಗಳನ್ನು ಮಡಿ ಮಾಡಿ ಅವರಿಗೆ ತಲುಪಿಸುವ ಕಾಯಕ ಮಾಡುತ್ತಿದ್ದರು. ಮಡಿ ಬಟ್ಟೆ ಹೊತ್ತುಕೊಂಡು ವೀರಗಂಟೆ ಬಾರಿಸುತ್ತಾ ಭಕ್ತರಲ್ಲದವರು ತಮ್ಮನ್ನು ಮುಟ್ಟಬಾರದೆಂಬ ನಿಯಮವನ್ನು ವಿಧಿಸಿಕೊಂಡಿದ್ದ ನೇರ ಹಾಗೂ ನಿಷ್ಟೂರವಾದಿ ಮಾಚಿದೇವರು. ಅವರ ಆದರ್ಶ ಮೌಲ್ಯಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಶಾಸಕರು ತಿಳಿಸಿದರು. ▪️ಅನುಭವ ಮಂಟಪ ಕಟ್ಟುವಲ್ಲಿ ಮಾಚಿದೇವರ ಕಾಯಕ ಅತಿ ಮಹತ್ವದ್ದಾಗಿದೆ. ದೇಶದ ವಿವಿಧ ಭಾಗಗಳಿಂದ ಕಲ್ಯಾಣಕ್ಕೆ ಬರುವವರನ್ನು ಪರಿಕ್ಷೀಸಿ ಮಡಿ ಹಾಸಿ ಸ್ವಾಗತಿಸುವ ಜವಾಬ್ದಾರಿಯುತ ಕೆಲಸ ನಿರ್ವಹಿಸುತ್ತಿದ್ದರು. ಮಾಚಿದೇವರ ಪರೀಕ್ಷೆಗೆ ಒಳಪಡದ ಹೊರತು ಕಲ್ಯಾಣಪುರ ಪ್ರವೇಶದ ಪ್ರಮಾಣ ಪತ್ರ ಹೊರಗಿನಿಂದ ಬರುವವರಿಗೆ ಸಿಗುತ್ತಿರಲಿಲ್ಲ ಇದು ಮಡಿವಾಳ ಮಾಚಿದೇವರ ಮಹಾ ಘನತೆಗೆ ಸಾಕ್ಷಿಯಾಗಿದೆ ಎಂದರು. ▪️ಮಾಚಿದೇವಚ ಅವರು ಸ್ವಾಮಿ ನಿಷ್ಠೆಗೆ ತನ್ನಮಗನ ಪ್ರಾಣವನ್ನೆ ತ್ಯಾಗ ಮಾಡಿದಂತಹ ಒಬ್ಬಶ್ರೇಷ್ಟ ವ್ಯಕ್ತಿಯಾಗಿದ್ದಾರೆ. 12ನೇ ಶತಮಾನದಲ್ಲಿ ಬಸವಣ್ಣನವರ ಜೊತೆ ಸೇರಿ ಅಸ್ಪøಶ್ಯತೆ, ಸಾಮಾಜಿಕ ಅಸಮಾನತೆ ಹೋಗಲಾಡಿಸುವ ಸಲುವಾಗಿ ಸರಳ ವಚನಗಳನ್ನು ರಚಿಸಿ ಜನರನ್ನು ಎಚ್ಚರಿಸಿದರು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು. ▪️ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚೂಡಾ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಉದಯಕುಮಾರ್, ಜಿಲ್ಲಾ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಸಮಾಜದ ಮುಖಂಡರಾದ ದುಂಡುಮಹದೇವ, ಸಿದ್ದಶೆಟ್ಟಿ, ರಮೇಶ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Comments