
HD Kumaraswamy
February 8, 2025 at 10:05 PM
ಮೈಸೂರಿನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (#abvp) ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕಾತ್ಮತಾ ಯಾತ್ರೆಯ ನಾಗರಿಕ ಸ್ವಾಗತ ಕಾರ್ಯಕ್ರಮದಲ್ಲಿ ಬಹಳ ಸಂತೋಷವಾಗಿ ಭಾಗಿಯಾಗಿದೆ.
ಈಶಾನ್ಯ ರಾಜ್ಯಗಳಿಂದ ನಮ್ಮ ಹೆಮ್ಮೆಯ ಮೈಸೂರು ನಗರಕ್ಕೆ ಬಂದಿದ್ದ ನೂರಾರು ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದೆ. ಸಾಂಸ್ಕೃತಿಕ ರಾಯಭಾರಿಯಾಗಿ ರಾಷ್ಟ್ರದ ಒಗ್ಗಟ್ಟನ್ನು ಬಲಪಡಿಸುವ ನಿಟ್ಟಿನಲ್ಲಿ ಎಬಿವಿಪಿ ಕೈಂಕರ್ಯ ಅಭಿನಂದನಾರ್ಹ.
ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರ ಸಧೃಢ ನಾಯಕತ್ವದಲ್ಲಿ ಈಶಾನ್ಯ ರಾಜ್ಯಗಳಲ್ಲಿ ಅಭಿವೃದ್ಧಿಯು ಶರವೇಗ ಪಡೆದುಕೊಂಡಿದ್ದು, ವಿದ್ಯಾರ್ಥಿಗಳು ಈ ಬಗ್ಗೆ ಮುಕ್ತವಾಗಿ ಮಾಹಿತಿ ಹಂಚಿಕೊಂಡರು.
ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದ ಗೌರವಾನ್ವಿತ ಸಂಸದರಾದ ಶ್ರೀ @yaduveerwadiyar ಅವರು, ಕಾಂಬೋಡಿಯಾದ ಕಾನ್ಸುಲ್ ಜನರಲ್ ಶ್ರೀ ಕಾರ್ತಿಕ್ ತಲ್ಲಂ, ಎಬಿವಿಪಿ ಅಖಿಲ ಭಾರತ ಉಪಾಧ್ಯಕ್ಷ ಪ್ರೊ. ಮಂದ್ರಾ ಭಾನುಶೇರ್ ಹಾಗೂ ಮಿಜೋರಂ, ಮೇಘಾಲಯ, ನಾಗಲ್ಯಾಂಡ್ ರಾಜ್ಯಗಳ ಸಂಘಟನಾ ಕಾರ್ಯದರ್ಶಿ ಶ್ರೀ ಮಂಜುನಾಥ ಮಂಗಳಗಿ, ವಿದ್ಯಾರ್ಥಿಗಳ ಪ್ರವಾಸದ ಉಸ್ತುವಾರಿ ಡಾ. ಲಿಖಿತಾ ಗೌಡ, ಜಂಟಿ ಉಸ್ತುವಾರಿ ಶ್ರೀ ಪ್ರಜ್ವಲ್, ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷ ಶ್ರೀ ವಿಶ್ವಪ್ರಸಾದ್ ಆಳ್ವಾ, ಉಪಾಧ್ಯಕ್ಷ ಪ್ರೊ. ಎಂ.ಆರ್.ಗಂಗಾಧರ್, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ. ಚಂದ್ರಶೇಖರ್ ಸೇರಿ ಈಶಾನ್ಯ ಭಾಗದ ಏಳೂ ರಾಜ್ಯಗಳಿಂದ ಆಗಮಿಸಿದ್ದ 216ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸುಂದರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
#northeast #seil #mysuru
@BJP4India @BJP4Karnataka @JanataDal_S @ABVPVoice
❤️
🙏
5